ಉಪಚುನಾವಣೆಯಲ್ಲಿ ಪ್ರಿಯಾಂಕಾ ಸ್ಪರ್ಧಿಸಲ್ಲ: ಶಾಸಕ ಸತೀಶ

ಚನ್ನಮ್ಮನಕಿತ್ತೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಸಮೀಪದ ಅಂಬಡಗಟ್ಟಿ ಗ್ರಾಮದಲ್ಲಿ ಭಾನುವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಮಗಳಿಗೆ ಇನ್ನೂ ರಾಜಕೀಯ ಅನುಭವದ ಕೊರತೆ ಇದೆ. ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೆಂಬುದು ಊಹಾಪೋಹ. ಈಗಲೇ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ" ಎಂದು ಸತೀಶ ಸ್ಪಷ್ಟಪಡಿಸಿದರು.

promotions

"ಈಗಾಗಲೇ ತಿಳಿಸಿರುವಂತೆ ಉಪಚುನಾವಣೆಗೆ ಪಕ್ಷದಿಂದ ಮೂವರ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ. ಹೈಕಮಾಂಡ್ ಸೂಚಿಸಿದವರು ಅಭ್ಯರ್ಥಿಯಾಗಲಿದ್ದಾರೆ" ಎಂದರು. ವರಿಷ್ಠರ ಗಮನಕ್ಕೆ ಬಂದಿದೆ: ಕಿತ್ತೂರು ತಾಲೂಕಿನಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಚನ್ನಮ್ಮನ ಕಿತ್ತೂರು ಮಾತ್ರವಲ್ಲ ರಾಜ್ಯದ ಅನೇಕ ಮತಕ್ಷೇತ್ರಗಳಲ್ಲಿ ಈ ಸಮಸ್ಯೆ ಇದೆ. ಇದು ವರಿಷ್ಠರ ಗಮನಕ್ಕೂ ಬಂದಿದೆ.

promotions

ಈ ಬಗ್ಗೆ ವರಿಷ್ಠರು ಚರ್ಚಿಸಿ ಕ್ರಮಕೈಗೊಳ್ಳಲಿದ್ದಾರೆ" ಎಂದು ತಿಳಿಸಿದರು. "ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿದ್ದಾರೆ. ಹೆಚ್ಚಿನ ಪಂಚಾಯ್ತಿಗಳಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಕಮೀಟಿಯೂ ರಚನೆಯಾಗಿವೆ. ನೂತನ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಗ್ರಾಮಸ್ಥರಿಗೆ ಸಮರ್ಪಕವಾಗಿ ತಲುಪಿಸುವ ಕಾರ್ಯ ಮಾಡಬೇಕು" ಎಂದು ಹೇಳಿದರು.

Read More Articles