ಸ್ಮಶಾನದಲ್ಲಿ ಜಾತ್ರೆಗೆ ಚಾಲನೆ ನೀಡಿದ ಶಾಸಕ‌ ಸತೀಶ

ಗೋಕಾಕ : ಮೌಢ್ಯಕ್ಕೆ ಸಡ್ಡು ಹೊಡೆದು ಸಮಾಜದಲ್ಲಿನ ಮೂಢನಂಬಿಕೆ ವಿರುದ್ಧ ಸಮರ ಸಾರುವ ಮೂಲಕ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಈಗ ಮತ್ತೊಂದು ವಿನೂತನ ಕಾರ್ಯಕ್ರಮ ನಡೆಸಲು ಮುಂದಾಗಿದ್ದಾರೆ.

promotions

ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ನೇತೃತ್ವದಲ್ಲಿ ' ಸ್ಮಶಾನ ಜಾತ್ರೆ ' ಎಂಬ ವಿನೂತನ ಕಾರ್ಯಕ್ರಮವನ್ನು ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

promotions

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಉತ್ಸಾಹಿ ಯುವಕರು ಸ್ಮಶಾನ ಜಾತ್ರೆ ಎಂಬ ಹೊಸ ಕಾನ್ಸೆಪ್ಟ್ ನಲ್ಲಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ನಾನು ಸಹ ಭಾಗವಹಿಸಲಿದ್ದೇನೆ ಎಂದಿದ್ದಾರೆ.

ಮೌಢ್ಯದ ವಿರುದ್ಧ ನಿರಂತರ ನಮ್ಮ ಹೋರಾಟ ನಡೆಸುತ್ತಿದ್ದೇವೆ. ಈಗ ಯುವಕರೇ ಮುಂದೆ ಬಂದು ಕಾರ್ಯಕ್ರಮ ನಡೆಸುತ್ತಿದ್ದಾರೆ. ಸ್ವಾಮೀಜಿಗಳು, ಸಾಹಿತಿಗಳು, ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿಕ್ಷಣ ಹಾಗೂ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ' ಮೂಢನಂಬಿಕೆಗೆ ಮುಕ್ತಿ ಶಿಕ್ಷಣಕ್ಕೆ ಶಕ್ತಿ ' ಎಂಬ ಹೊಸ ಕಾನ್ಸೆಪ್ಟದೊಂದಿಗೆ ನಡೆಸಲಾಗುತ್ತಿದೆ. ಜೊತೆಗೆ ಸರ್ಕಾರದ ಸೌಲಭ್ಯಗಳ ಬಗ್ಗೆ, ಸಮಾಜದಲ್ಲಿ ಬದುಕುವ ರೀತಿಯ ಕುರಿತು ಜಾಗೃತಿಯೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Read More Articles