ಕನ್ನಡ ಧ್ವಜ ತೆರವು ವಿಚಾರ ಮೋರ್ಚಾ ಕೈಬಿಡಲು ಮನವಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಮಹಾನಗರ ಪಾಲಿಕೆ ಎದುರಿನ‌ ಕನ್ನಡ ಧ್ವಜ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕೆಲ ಸಂಘಟನೆಗಳು ಸೋಮವಾರ ನಡೆಸಲು ಉದ್ಧೇಶಿಸಿರುವ ಮೋರ್ಚಾ ಕೈಬಿಡುವಂತೆ ಮುಖಂಡರಿಗೆ ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

promotions

ಪಾಲಿಕೆ ಎದುರಿನ ಧ್ವಜ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಮರಾಠಾ ಸಮಾಜ ಹಾಗೂ ಎಂ.ಇ.ಎಸ್.ನ ಮುಖಂಡರ ಜತೆ ಚರ್ಚಿಸಲಾಯಿತು. ಎಲ್ಲ ಕನ್ನಡಪರ ಸಂಘಟನೆಗಳ ಜತೆಯೂ ಮಾತುಕತೆಯನ್ನು ನಡೆಸಿ ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು.

promotions

ಆದ್ದರಿಂದ ವಿವಿಧ ಸಂಘಟನೆಗಳು ಸೋಮವಾರ ನಡೆಸಲು ಉದ್ಧೇಶಿಸಿರುವ ಮೋರ್ಚಾ ಕೈಬಿಡಬೇಕು ಎಂದು ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದ್ದಾರೆ.

Read More Articles