ಮಾನ್ಯ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಶ್ರೀ ಮುರುಗೇಶ್ ಆರ್.ನಿರಾಣಿ ರವರ ಬಜೆಟ್ ಪ್ರತಿಕ್ರಿಯೆ
- 15 Jan 2024 , 2:22 AM
- Bengaluru
- 96
ಬೆಂಗಳೂರು: ಮುಖ್ಯಮಂತ್ರಿ ಶ್ರೀಯುತ ಬಿ.ಎಸ್.ಯಡಿಯೂರಪ್ಪ ರವರು ಸವಾಲುಗಳ ನಡುವೆಯೂ ಇಂದು ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರಕ್ಕೂ ನ್ಯಾಯ ಒದಗಿಸಲಾಗಿದ್ದು, ಇದು ಆರ್ಥ ವ್ಯವಸ್ಥೆಗೆ ಪುನಶ್ಚೇತನ ನೀಡಲಿದೆ. ಜೊತೆಗೆ ರಾಜ್ಯದಲ್ಲಿ ಇನ್ನಷ್ಟು ಆರ್ಥಿಕ ಚಟುವಟಿಕೆಗಳಿಗೆ ʼವೇಗವರ್ಧಕ' ನೀಡುವುದರಲ್ಲಿ ಅನುಮಾನವೇ ಇಲ್ಲ.

ಜನಸಾಮಾನ್ಯರು ಹಾಗೂ ಮಧ್ಯಮವರ್ಗದರಿಗೆ ಹೊರೆಯಾಗದಂತೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸದೆ, ಬಡವರು, ಶೋಷಿತರು, ದೀನದಲಿತರು, ಕಾರ್ಮಿಕರು, ಮಹಿಳೆಯರು, ಹಿರಿಯ ನಾಗರಿಕರು, ಸೇರಿದಂತೆ ಎಲ್ಲರಿಗೂ ಸಂತೃಪ್ತಿಪಡಿಸುವ ಮೂಲಕ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಮಾನ್ಯ ಶ್ರೀಯುತ ಬಿ.ಎಸ್.ಯಡಿಯೂರಪ್ಪ ರವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅಭಿನಂದನೆಗಳು.











