ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ - ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಗೊಳಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

promotions

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಮಹತ್ವದ ಸಭೆಯಲ್ಲಿ ಅವರು ಈ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸೋಂಕು ಹರಡುವಿಕೆ ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳುವ ಕ್ರಮಗಳನ್ನು ಪರಾಮರ್ಶಿಸಲು ಮತ್ತು ಮಾರ್ಗಸೂಚಿಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಎಡಿಜಿಪಿ ಮಟ್ಟದ ಅಧಿಕಾರಿಗಳನ್ನು ವಲಯವಾರು ನಿಯೋಜಿಸಲಾಗಿದೆ.

promotions

ಸರ್ಕಾರ ಜಾರಿಗೊಳಿಸಿರುವ ಕಠಿಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ .

ಕೋವಿಡ್ ನಿಯಂತ್ರಣದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಸುರಕ್ಷತೆಗೂ ಹೆಚ್ಚು ಆದ್ಯತೆ ನೀಡಬೇಕು. ಎಸ್ ಡಿ ಆರ್ ಎಫ್ ಅಡಿ ೧೦ ಕೋಟಿ ರೂಪಾಯಿ ನೆರವು ಕೋರಲಾಗಿದೆ ಎಂದು ಬೊಮ್ಮಾಯಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

Read More Articles