ಬೆಳಗಾವಿ ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ
- 15 Jan 2024 , 1:09 AM
- Belagavi
- 103
ಜಿಲ್ಲೆಯ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ಹಾಗೂ ಬಳ್ಳಾರಿ ನಾಲಾ ಪ್ರವಾಹದಿಂದ ಬೆಳೆಗಳು ಕೊಚ್ಚಿ ಹೋಗಿವೆ. ಮನೆಗಳು ಹಾಗೂ ಬೆಳೆಗಳಿಗೆ ಹಾನಿಯಾಗಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರಕಾರ ಸೂಕ್ತ ಪರಿಹಾರ ನೀಡಿಲ್ಲ . ಕಳೆದ 11 ತಿಂಗಳಿಂದ ನೆರೆ ಸಂತ್ರಸ್ತರ ನೆರವಿಗೆ ಬಾರದ ರಾಜ್ಯ ಸರ್ಕಾರ ಧೋರಣೆ ಖಂಡಿಸಿ ಪ್ರತಿಭಟನೆ ನಡಿಸಿದ್ದರು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ರೈತರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಪೋಲಿಸರು ವರ್ತನೆಗೆ ರೈತ ಮುಖಂಡರು ಕಿಡಿ ಕಾಡಿದರು .











