ಕೊರೊನಾ ಭೀತಿ ಮಧ್ಯೆಯೂ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ಸಜ್ಜಾದ ವಿದ್ಯಾರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮಿತಿಮೀರಿದೆ ಇದರ ನಡುವೆಯೂ ಸರ್ಕಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲು ನಾಳೆಯಿಂದ ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ ಆದರೆ ಎಲ್ಲರಿಗು ಕೊರೊನಾ ಭಯಾ ಅಂತು ಇದ್ದೆ ಇದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ಸರ್ಕಾರ ಯಾವ ರೀತಿ ಕಾಯುತ್ತೋ ಎಂಬ ಪ್ರಶ್ನೆಯಂತು? ಪ್ರತಿಯೊಬ್ಬರಲ್ಲೂ ಇದ್ದೆ ಇದೇ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಲ್ಲ . ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದಲೇ ಪರೀಕ್ಷೆ ನಡೆಸುತ್ತಿದ್ದೇವೆ. ಇಂದು ಪ್ರಾರಂಭವಾಗಲಿರುವ ಪರೀಕ್ಷೆಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪರೀಕ್ಷೆಯನ್ನು ಯಶಸ್ವಿಯಾಗಿ ಆಯೋಜಿಸಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು .

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ದರಾಗಿದ್ದರೆ . ಬೆಂಗಳೂರಿನಲ್ಲಿ 1,13,800 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ , ರಾಜ್ಯಾದ್ಯಂತ 10 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದು ಕ್ವಾರಂಟೈನ್ನಲ್ಲಿದ್ದಾರೆ . ಇವರಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ . ಆದರೆ ಆಗಸ್ಟ್ ತಿಂಗಳಲ್ಲಿ ಇವರಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುವುದು ಎಂದರು . ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಇರುತ್ತದೆ . ಇರುತ್ತದೆ . ಕಂಟೈನ್ಸೆಂಟ್ ಜೋನ್ನಲ್ಲಿದ್ದ 26 ಪರೀಕ್ಷಾ ಕೇಂದ್ರಗಳನ್ನ ಸ್ಥಳಾಂತರ ಮಾಡಲಾಗಿದೆ.

5757 ಪರೀಕ್ಷಾ ಕೇಂದ್ರಗಳನ್ನೂ ಸ್ಯಾನಿಟೈಸ್ ಮಾಡಲಾಗಿದೆ ಮಕ್ಕಳ ಆರೋಗ್ಯ ದೃಷ್ಟಿಯಿಂದ ಆರೋಗ್ಯ ತಪಾಸಣಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ಎಲ್ಲರಿಗೂ ಮಾಸ್ಕ್ ಕಡ್ಡಾಯ ಇರುತ್ತದೆ . ಜ್ವರ , ಕೆಮ್ಮು , ನೆಗಡಿ ಇರುವವರಿಗೆ ಎನ್‌ 95 ಮಾಸ್ಕ್ ನೀಡಲಾಗುವುದು ಎಂದು ಶಿಕ್ಷಣ ಸಚಿವರು ವಿವರ ನೀಡಿದರು . ಸಾರಿಗೆ ಸಂಪರ್ಕ ಇಲ್ಲದ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಖಾಸಗಿ ವಾಹನದ ವ್ಯವಸ್ಥೆ ಮಾಡಲಾಗಿದೆ . ಗಡಿಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ . ಪರೀಕ್ಷಾ ಕೇಂದ್ರಗಳ ಸುತ್ತಲೂ ಝರಾಕ್ಸ್ , ಸೈಬರ್ ಸೆಂಟರ್ಗಳಿದ್ದರೆ ಅವನ್ನ ಮುಚ್ಚಲು ಆದೇಶಿಸಲಾಗಿದೆ ತಿಳಿಸಿದರು ಇಂದು ನೆಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳಲಾಗಿದೆ.

promotions

Read More Articles