ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ಮೂರು ಸಾವಿರಮಠದ ಗಂಗಾಧರ ಶ್ರೀಗಳ ಅವರ ಕೊಲೆಗೆ ಯತ್ನ ನಡೆದಿದೆ. ಈ ಸಂಬಂಧ ಅದೇ ಗ್ರಾಮದ ಮಲ್ಲಿಕಾರ್ಜುನ ಬುಡಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು. ಜಿಲ್ಲಾ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಮಠದಲ್ಲಿ ಕಳವು ಮಾಡಲು ಬಂದಾಗ ಶ್ರೀಗಳು ವಿರೋಧ ಮಾಡಿದ್ದಕ್ಕೆ, ಕೊಲೆಗೆ ಯತ್ನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆರೋಪಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.