ಬಿಜೆಪಿಗೆ ತಿರುಮಂತ್ರ ಹಾಕಿದ ಕೇಜ್ರಿವಾಲ ಸರ್ಕಾರ
- 15 Jan 2024 , 3:31 AM
- Delhi
- 152
ದೆಹಲಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ ಮಧ್ಯಂತರ ವರದಿಯ ಕುರಿತು ಬಿಜೆಪಿ ಮತ್ತು ಎಎಪಿ ನಡುವೆ ಬಿರುಗಾಳಿ ಬೀಸಿದೆ,ಕೋವಿಡ-19 ಸಾಂಕ್ರಾಮಿಕ ರೋಗದ ಎರಡನೇ ತರಂಗದಲ್ಲಿ ದೆಹಲಿ ಸರ್ಕಾರವು ವೈದ್ಯಕೀಯ ಆಮ್ಲಜನಕದ ಅವಶ್ಯಕತೆಗಳನ್ನು ನಾಲ್ಕು ಪಟ್ಟು ಹೆಚ್ಚಿಸಿದೆ ಎಂದು ಆ ವರದಿಯಲ್ಲಿ ಹೇಳಲಾಗಿತ್ತು.

ಈಗ, ಆಮ್ಲಜನಕದ ಲೆಕ್ಕಪರಿಶೋಧನೆಯನ್ನು ನಡೆಸಲು ರಚಿಸಲಾದ ಸಮಿತಿಯ ನೇತೃತ್ವ ವಹಿಸಿದ್ದ ಏಮ್ಸ್ ನ ಡಾ. ರಣದೀಪ್ ಗುಲೇರಿಯಾ, "ದೆಹಲಿ ಆಮ್ಲಜನಕ ಲೆಕ್ಕಪರಿಶೋಧನೆಯು ಮಧ್ಯಂತರ ವರದಿಯಾಗಿದೆ ಮತ್ತು ಇದು ಫೈನಲ ವರದಿ ಅಲ್ಲ ಎಂದು ಹೇಳಿದ್ದಾರೆ.

ವರದಿ ಬೆಳಕಿಗೆ ಬಂದ ನಂತರ, ಡಾ. ಗುಲೇರಿಯಾ ಅವರಲ್ಲದೆ, ದೆಹಲಿ ಸರ್ಕಾರದ ಪ್ರಧಾನ ಗೃಹ ಕಾರ್ಯದರ್ಶಿ ಭೂಪಿಂದರ್ ಭಲ್ಲಾ ಮತ್ತು ಮ್ಯಾಕ್ಸ್ ಹೆಲ್ತ್ಕೇರ್ ನಿರ್ದೇಶಕ ಸಂದೀಪ್ ಬುದ್ಧಿರಾಜ ಮತ್ತು ಇಬ್ಬರು ಸದಸ್ಯರು ಈ ಬಗ್ಗೆ ಹೇಳಿಕೊಳ್ಳುತ್ತಿರುವ ವಿರುದ್ಧ ಆಕ್ಷೇಪಣೆಗಳನ್ನು ಎತ್ತಿದ್ದಾರೆ.










