ಸಿಎಂ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು: ಶಾಸಕ ಸತೀಶ
- 14 Jan 2024 , 11:38 PM
- Belagavi
- 106
ಬೆಳಗಾವಿ :ಕಾಂಗ್ರೆಸ್ ನಲ್ಲಿ ಸಿಎಂ ಯಾರ ಆಗಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಗುರುವಾರ ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜಕೀಯದಲ್ಲಿ ಒಗಳು ಸಹಜ. ಸಿಎಂ ಚರ್ಚೆ ಮಾಡುವುದು ಈಗ ಸೂಕ್ತವಲ್ಲ. ಚುನಾವಣೆ ಇನ್ನೂ ಮುಂದೆ ಇದೆ. ಇದನ್ನು ಅಂತಿಮವಾಗಿ ಹೈಕಮಾಂಡ್ ನಿರ್ಣಯವೇ ಅಂತಿಮ ಎಂದರು. ಡಿಸಿಎಂ ಲಕ್ಷ್ಮಣ ಸವದಿ ಅವರು ಕೂಸು ಹುಟ್ಟುವ ಮುಂಚೆಯೇ ಕುಲಾಯಿ ಹೊಲಿಸಿದರು ಎಂಬ ಹೇಳಿಕೆಗೆ ಟಾಂಗ್ ನೀಡಿದ ಸತೀಶ ಜಾರಕಿಹೊಳಿ, ವಿಜಯಪುರದ ಬಿಜೆಪಿ ಶಾಸಕ ಬಸನಗೌಡಾ ಪಾಟೀಲ ಯತ್ನಾಳ ಏನು ಮಾತನಾಡ್ತಿದ್ದಾರೆ ಎನ್ನುವುದು ಮೊದಲು ಅರಿತುಕೊಳ್ಳಲಿ ಎಂದು ಹೇಳಿದರು.

ಕೊರೊನಾ ವ್ಯಾಕ್ಸಿನ್ ಎಲ್ಲಿಯೂ ಸಿಗುತ್ತಿಲ್ಲ. ಬಿಜೆಪಿಯವರು ಕೇವಲ ಬಡಾಯಿ, ಸುಳ್ಳು ಹೇಳುತ್ತಿದ್ದಾರೆ. ಬೆಳಗಾವಿಯಲ್ಲಿ ಎಲ್ಲಿ ವ್ಯಾಕ್ಸಿನ್ ಸಿಗುತ್ತಿದೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಕಡೆ ಪಕ್ಷ ಸಂಘಟನೆ ಮಾಡುತ್ತಿದ್ದೇವು.
ಆದರೆ ನಮ್ಮ ಪುತ್ರಿ ಚುನಾವಣೆಗೆ ಸ್ಪರ್ಧೆ ನಡೆಸುತ್ತಾರೆ ಎನ್ನುವುದು ಸುಳ್ಳು. ಅವರು ಇನ್ನೂ ಅನುಭವ ಬೇಕು. ಅವರಿಗೆ ಜವಾಬ್ದಾರಿ ಬಂದ ಮೇಲೆ ವಿಚಾರ ಮಾಡೋಣ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಉಪಸ್ಥಿತರಿದ್ದರು.










