ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿ ಮಾಡಬೇಕು :ಸಿಟಿ ರವಿ

ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಕೂಡಾ ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಯೋಚಿಸಿದೆ ಎಂದು ಸಿಟಿ ರವಿ ಟ್ವಿಟ್ ಮೂಲಕ ತಿಳಿಸಿದ್ದಾರೆ.

promotions

ನೈಸರ್ಗಿಕ ಸಂಪನ್ಮೂಲಗಳು ಸೀಮಿತವಾಗಿದ್ದು ಜನಸಂಖ್ಯೆ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ಏನಿದು ಜನಸಂಖ್ಯಾ ನಿಯಂತ್ರಣ ಮಸೂದೆ...?
ಎರಡು ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರಿಗೆ ಯಾವುದೇ ವಿಶೇಷ ರಿಯಾಯಿತಿ ಅಥವಾ ಸವಲತ್ತುಗಳನ್ನು ನೀಡಬಾರದು ಮತ್ತು ಅಧಿಕೃತ ಸೌಕರ್ಯಗಳನ್ನು ಬಳಸದಂತೆ ನಿರ್ಬಂಧಿಸಬೇಕು ಎಂದು ಮಸೂದೆ ಹೇಳುತ್ತದೆ.

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದನ್ನು, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಮತ್ತು ಯಾವುದೇ ರೀತಿಯ ಸರ್ಕಾರಿ ಸಹಾಯಧನವನ್ನು ಪಡೆಯುವುದನ್ನು ನಿಷೇಧಿಸಲು ಈ ಮಸೂದೆ ತಿಳಿಸುತ್ತದೆ.

Read More Articles