ಡಾ.ಶಾಮ ಪ್ರಸಾದ್ ಮುಖರ್ಜಿ ಯವರ ಬಲಿದಾನ ಮತ್ತು ಜನ್ಮ ಜಯಂತಿ ಆಚರಣೆ
- 14 Jan 2024 , 11:20 PM
- Belagavi
- 132
ಕಿತ್ತೂರು: ಕಿತ್ತೂರು ವಿಧಾನಸಭಾ ಮತಕ್ಷೇತ್ರದ ವತಿಯಿಂದ ಡಾ ಶಾಮ ಪ್ರಸಾದ್ ಮುಖರ್ಜಿ ಯವರ ಬಲಿದಾನ ಮತ್ತು ಜನ್ಮ ಜಯಂತಿ ನಿಮಿತ್ಯವಾಗಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಪರಿಸರ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತು.

ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಇವತ್ತು ಡಾ.ಶಾಮ ಪ್ರಸಾದ್ ಮುಖರ್ಜಿ ಯವರ ಬಲಿದಾನ ಮತ್ತು ಜನ್ಮ ದಿನದ ನಿಮಿತ್ಯವಾಗಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರಕಾರಣಿ ಸದಸ್ಯ ಪೃಥ್ವಿ ಸಿಂಗ್ ಅವರ ನೇತೃತ್ವದಲ್ಲಿ 1000 ಗಿಡಗಳನ್ನ ನೆಡುವ ಮೂಲಕ ವಿಶೇಷವಾಗಿ ಜನ್ಮ ದಿನ ಆಚರಣೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರಾವ ಬಹುದೂರ ಕದಂ,ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರಕಾರಣಿ ಸದಸ್ಯ ಪೃಥ್ವಿ ಸಿಂಗ್,ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಯಲ್ಲೇಶ ಕೋಲಕಾರ್, ಜಿಲ್ಲಾ ಸಂಚಾಲಕ ರಮೇಶ್ ಹರಿಜನ್,ಮಂಡಲ ಅಧ್ಯಕ್ಷ ಸುಶೀಲ್ ಮುಂತಾದವರು ಉಪಸ್ಥಿತರಿದ್ದರು










