ದೇಶ ಸೇವೆ ಮಾಡುವುದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ; ಲೀಲಾವತಿ ಕರಲಿಂಗಣ್ಣವರ
- 15 Jan 2024 , 2:19 AM
- Belagavi
- 171
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮ ಪಂಚಾಯತಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಲೀಲಾವತಿ ಕರಲಿಂಗಣ್ಣವರ ದ್ವಜಾರೋಹನ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪಿಡಿಒ ಲೀಲಾವತಿ ನಾವೆಲ್ಲರೂ ದೇಶ ಸೇವೆ ಮಾಡುವುದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದರು ಕಾರ್ಯದರ್ಶಿ ಆಸ್ಪಾಕ ಅತ್ತಾರ್, ಗ್ರಾಮ ಪಂಚಾಯತಿ ಸರ್ವ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.












