ಬೆಳಗಾವಿಗೆ ನೂತನ ಉಸ್ತುವಾರಿ ಸಚಿವರ ಆಗಮನ : ಹಲವು ಮಹನೀಯರ ಪುತ್ಥಳಿಗೆ ಮಾಲಾರ್ಪಣೆ..!
- 15 Jan 2024 , 2:26 AM
- Belagavi
- 112
ಗೋಕಾಕದಿಂದ ನೇರವಾಗಿ ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಸಚಿವರು, ಕಿತ್ತೂರು ಚೆನ್ನಮ್ಮ, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಛತ್ರಪತಿ ಶಿವಾಜಿ ಹಾಗೂ ಬಸವೇಶ್ವರ ಪುತ್ಥಳಿಗಳಿಗೂ ಮಾಲಾರ್ಪಣೆ ಮಾಡಿದರು.
ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪಕ್ಷದ ಕಾರ್ಯಕರ್ತರು ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಪ್ರವಾಸಿಮಂದಿರಕ್ಕೆ ತೆರಳಿದ ಅವರನ್ನು ನೂರಾರು ಬೆಂಬಲಿಗರು ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.











