ಅ.21 ರಂದು ಉತ್ತರದತ್ತ ಪ್ರಯಾಣ ಬೆಳೆಸಲಿರುವ ಸಿಎಂ ಯಡಿಯುರಪ್ಪ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉತ್ತರ ಕರ್ನಾಟಕ ತತ್ತರಿಸಿದೆ. ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹದಿಂದ ಭಾರಿ ಪ್ರಮಾಣ ನಷ್ಟವುಂಟಾಗಿದೆ. ಈ ಹಿನ್ನಲೆಯಲ್ಲಿ ಅ.21 ರಂದು ಸಿಎಂ ಯಡಿಯುರಪ್ಪ ಉತ್ತರ ಕರ್ನಾಟಕದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರವಾಹದಿಂದ ಈಗಾಗಲೆ 4 ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಭಾಗಶಃ ಜಲಾವೃತವಾಗಿದ್ದು ನಷ್ಟಕೊಳಗಾದ ಜಿಲ್ಲೆಗಳಿಗೆ ಸಿಎಂ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ.

promotions

ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ ನೇರವಾಗಿ ಪರಿಸ್ಥಿತಿ ಅರಿಯುವ ಉದ್ದೇಶದಿಂದ ವೈಮಾನಿಕ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

promotions

Read More Articles