ಬಿಹಾರ ವಿಧಾನಸಭಾ ಚುನಾವಣೆ; ನರೇಂದ್ರ ಮೋದಿ ಏನು ಹೇಳಿದ್ರು ಗೋತ್ತಾ…?
- 19 Dec 2023 , 4:08 AM
- Bihar
- 105
ಬಿಹಾರ: ರಾಮ್ ವಿಲಾಸ್ ಪಾಸ್ವಾನ್ ಮತ್ತು ರಘುವನ್ಶ್ ಪ್ರಸಾದ್ ಅವರಿಗೆ ಗೌರವ ಸಲ್ಲಿಸುವ ಮೂಲಕ ಸಸಾರಂನ ಬಿಯಾಡಾ ಮೈದಾನದಲ್ಲಿ ಹಾಗೂ ಗಟಾದಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯವನ್ನು ಕತ್ತಲೆಗೆ ತಳ್ಳಿದ್ದಾರೆ ಎಂದು ಆರ್ಜೆಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಒಂದು ಕಾಲದಲ್ಲಿ ಬಿಹಾರವನ್ನು ಆಳಿದವರು ಈಗ ಮತ್ತೆ ಅಭಿವೃದ್ಧಿ ಹೊಂದುತ್ತಿರುವುದನ್ನು ತಮ್ಮ ದುರಾಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ ಎಂದು ಪ್ರಧಾನಿ ವಾಗ್ದಾಳಿ ನಡೆಸಿದರು. ಬಿಹಾರದಲ್ಲಿ ಯಾರು ಹಿಂದುಳಿದಿದ್ದಾರೆ ಎಂಬುದನ್ನು ಬಿಹಾರ ಜನರು ಮರೆಯಬಾರದು ಎಂದು ಹೇಳಿದರು.
— Narendra Modi (@narendramodi) October 23, 2020
ಬಿಹಾರ ವಿಧಾನಸಭಾ ಚುನಾವಣೆಯನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮೊದಲ ಹಂತದ ಮತದಾನ ಅಕ್ಟೋಬರ್ 28 ರಂದು ನಡೆಯಲಿದೆ. ಒಟ್ಟಾರೆಯಾಗಿ ಪ್ರಧಾನಿ ಮೋದಿ ಇನ್ನು 12 ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.










