ಬೆಂಗಳೂರು: ರಾಜ್ಯದಲ್ಲೇ ತೀವ್ರ ಕುತೂಹಲ ಮೂಡಿಸಿದ್ದ ಶಾಲಾ ಕಾಲೇಜುಗಳ ಆರಂಭಕ್ಕೆ ಇನ್ನೇನು ತೆರೆ ಬಿದ್ದಿದ್ದು, ರಾಜ್ಯದಲ್ಲಿನ ಶಾಲಾ - ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಲಿದ್ದಾರೆ. ಜನವರಿ 1 ರಿಂದ 10 ನೇ ತರಗತಿ ಹಾಗೂ 12 ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುವುದಾಗಿ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದರು.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಸಿಎಂ ಯಡಿಯೂರಪ್ಪ 2021 ರ ಜನವರಿ 1 ರಿಂದ , 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9 ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಮಾಡಲಾಗುತ್ತಿದೆ.
ಪ್ರಾಥಮಿಕ ಶಿಕ್ಷಣ ಸಚಿವರು, ಕೋವಿಡ್19 ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಇಂದು ವಿಸ್ತೃತವಾಗಿ ಚರ್ಚಿಸಿ, 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. 15 ದಿನ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧರಿಸಲಾಗುವುದು.
— B.S. Yediyurappa (@BSYBJP) December 19, 2020
ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ಪ್ರಾರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದಾಗಿ ಇಂದು ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.