ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಈರಣ್ಣ ಕಡಾಡಿ ಹಾಗೂ ಅಶೋಕ ಗಸ್ತಿ

  • 17 Dec 2023 , 8:38 PM
  • Bengaluru
  • 182
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಹಾಗೂ ಆಶೋಕ್ ಗಸ್ತಿ ಇಂದು ಮಂಗಳವಾರ ನಾಮಪತ್ರ ಸಲ್ಲಿಸಿದರು. ಇಂದು ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ವಿಧಾನಸಭಾ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಗೆ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಪ್ರಭಾಕರ್ ಕೋರೆ, ರಮೇಶ ಕತ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದು ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.

Read All News