ಬೆಳಗಾವಿ : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಇವರ ಅಧ್ಯಕ್ಷತೆಯಲ್ಲಿ ಜರುಗಿದ 2019-20ನೇ ಸಾಲಿನ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ವಿಕಲಚೇತನ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ತೀರ್ಮಾನಿಸಿದೆ.
ಜಿಲ್ಲೆಯ ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ಕಾಗವಾಡ ಮತ್ತು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರಗಳಲ್ಲಿ ನಿಗದಿಪಡಿಸಿದ ಗುರಿಗಿಂತ ಕಡಿಮೆ ಅರ್ಹ ಫಲಾನುಭವಿಗಳು ಆಯ್ಕೆಯಾಗಿರುತ್ತಾರೆ. ಕಾರಣ ಸದರಿ ನಾಲ್ಕು ಮತಕ್ಷೇತ್ರಗಳ ದೈಹಿಕ ವಿಕಲಚೇತನರಿಂದ ಮಾತ್ರ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಶೇಕಡಾ 75 ಅಥವಾ ಹೆಚ್ಚಿನ ಅಂಗವಿಕಲತೆ ಪ್ರಮಾಣ ಹೊಂದಿರುವ ಕನಿಷ್ಠ 20 ವರ್ಷ ಗರಿಷ್ಠ 60 ವರ್ಷ ವಯೋಮಿತಿಗೊಳಪಟ್ಟ ವಿಕಲಚೇತನ ವ್ಯಕ್ತಿಗಳು ತಮ್ಮ ತಾಲೂಕಿನ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ)ರಿಗೆ ಈ ಕೆಳಕಾಣಿಸಿದ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ನಿಗದಿಗೊಳಿಸಲಾದ ದಿನಾಂಕ ಜ.28 ರ ಒಳಗಾಗಿ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ತಾಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ.)ರನ್ನು ದೂರವಾಣಿ ಸಂಖ್ಯೆ: ( 0831-2476096) ಗೆ ಸಂಪರ್ಕಿಸಿ ಎಂದು ಜಿಲ್ಲಾ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲಿ ತಿಳಿಸಿದ್ದಾರೆ.