ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹುಕ್ಕೇರಿ ಕ್ಷೇತ್ರದ ಶಾಸಕರಾಗಿರುವ ಉಮೇಶ್ ಕತ್ತಿ ಹಾಗೂ ಬೀಳಗಿ ಮತಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ದೇವರು ಮತ್ತು ರೈತರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ