ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಕೊನೆಗೂ ನಾಲ್ಕು ವರ್ಷಗಳ ಜೈಲುವಾಸ ನಂತರ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಅವರು ಬಿಡುಗಡೆಗೊಂಡಿದ್ದಾರೆ. ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜಯ ಲಲಿತಾ ಆಪ್ತೆ ಶಶಿಕಲಾ 4 ವರ್ಷ ಗಳ ನಂತರ ಜೈಲಿ ನಿಂದ್ ಬಿಡುಗಡೆ ಹೊಂದಿದ್ದಾರೆ.
ಇವರು ಕೊರೊನ ದಿಂದ ಬಳಲುತಿರುವ ಕಾರಣ ಗುಣ ಮುಖವಾಗುವರೆಗು ಆಸ್ಫತ್ರೆಯಲ್ಲೇ ಉಳಿಯುತ್ತಾರೆ ಎಂದು ತಿಳಿದು ಬಂದಿದೆ.ಶಶಿಕಲಾ ಅವರನ್ನು ಬಿಡುಗಡೆ ಮಾಡುವ ಹೊತ್ತಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲಾ ಕೋವಿಡ್ ಶಿಷ್ಠಾಚಾರಗಳನ್ನು ಪೂರ್ಣಗೊಳಿಸಲಾಗಿದೆ.. ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹೆಚ್ಚಿನ ಭದ್ರತೆ ಕಲ್ಪಿಸಲಾಗುವುದು ಎಂದು ವಿವಿಪುರಂ ಪೊಲೀಸರು ತಿಳಿಸಿದ್ದಾರೆ.