ನಾನು ಯಾರಿಗೂ ಹೆದರುವ ಮಗನಲ್ಲ ಡಿಕೆಶಿ

  • 14 Jan 2024 , 9:35 PM
  • Shivamogga
  • 98

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದ ಜನಾಕ್ರೋಶ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಡಿ ಕೆ ಶಿವಕುಮಾರ್ ಸಿಡಿ ಪ್ರಕರಣ ಕುರಿತು ನಡೆಯಲಿರುವ ಎಸ್.ಐ.ಟಿ. ತನಿಖೆ ಸರಿದಾರಿಯಲ್ಲಿ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ನಮ್ಮ ಶಾಸಕರ ಮೇಲೆ ಕೇಸು ಹಾಕಿದೆ ಎಂದು ವಾಗ್ದಾಳಿ ನಡೆಸಿದ ಡಿಕೆಶಿ ಸಿಡಿ ವಿಚಾರದಲ್ಲಿ ನನ್ನನ್ನು ಸಿಲುಕಿಸಲು ನೋಡಿದ್ದಾರೆ. ಬಿಜೆಪಿಯವರು ಮಾಡಬಾರದ್ದನ್ನು ಮಾಡಿಕೊಂಡು ನಂತರ ಆರೋಪವನ್ನು ನಮ್ಮ ಮೇಲೆ ಹೊರಿಸಲು ಪ್ರಯತ್ನ ಪಟ್ಟಿದ್ದಾರೆ. ಆದರೆ ನಾನು ಯಾರಿಗೂ ಹೆದರುವ ಮಗನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

Read All News