ಬೆಳಗಾವಿ: ಲೋಕಸಭಾ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಅಂಜಲಿ ನಿಂಬಾಳಕರ, ಮಹಾಂತೇಶ ಕೌಜಲಗಿ, ಫಿರೋಜ್ ಸೇಠ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು.