ಬೆಳಗಾವಿ: SIT ಕಾನೂನಿನ ಚೌಕಟ್ಟಿನಲ್ಲಿ ತನ್ನ ಕೆಲಸವನ್ನ ನಿಷ್ಪಕ್ಷಪಾತವಾಗಿ ಮಾಡುತ್ತಿದೆ. ಸಿಡಿ ಪ್ರಕರಣದಲ್ಲಿ ಯಡಿಯೂರಪ್ಪ ಮೌನವಾಗಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಬೊಮ್ಮಾಯಿಯವರು ಜವಾಬ್ದಾರಿಯಿಂದ ಕೆಲಸವನ್ನ ಮಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಏನೇನು ಕೆಲಸ ಮಾಡಬೇಕು ಆ ರೀತಿ ಗೃಹ ಇಲಾಖೆ ಕೆಲಸವನ್ನು ಮಾಡುತ್ತಿದೆ. ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರು, ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.