ಬೆಳಗಾವಿ: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ್ ಇಂದು ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕ ಬಾಗೇವಾಡಿ ಗ್ರಾಮದವರಾದ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ, ರಾಜ್ಯದಲ್ಲಿ ರೈತರ ಕ್ರಾಂತಿ ಮಾಡಿದ್ದ ಬಾಬಾಗೌಡರು ಇಂದಿಗೂ ಸಹ ರೈತಪರ ಹೋರಾಟದಲ್ಲಿ ಭಾಗವಹಿಸುತ್ತಿದ್ದರು.