ಬೆಳಗಾವಿ : ಬಿಮ್ಸ್ ಆಡಳಿತಾಧಿಕಾರಿಯಾಗಿ ಆದಿತ್ಯ ಬಿಸ್ವಾಸ್ ಅವರನ್ನು ನೇಮಕ ಮಾಡಲಾಗಿದೆ. ನಾಳೆಯಿಂದಲೇ ಅವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶುಕ್ರವಾರ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಢಿಯನ್ನು ಉದ್ದೇಶಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಕರೋನಾ ತಡೆಗಟ್ಟಲು ಪ್ರತಿ ಗ್ರಾಪಂಗೆ 50 ಸಾವಿರ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಕೊರೋನಾ ತಪಾಸಣೆ ಜಿಲ್ಲಾಡಳಿತ ಉತ್ತಮವಾಗಿ ಮಾಡುತ್ತಿದೆ ಎಂದರು.