ಬೆಳಗಾವಿ: ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ವತಿಯಿಂದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಪುಣ್ಯ ತಿಥಿ ನಿಮಿತ್ಯ ಅವರ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡಿ, ಬೃಹತ್ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿರುವ ಸಂದರ್ಭ..
ಈ ಸಂದರ್ಭದಲ್ಲಿ ಸಂಸದರಾದ ಶ್ರೀಮತಿ ಮಂಗಲಾ ಸುರೇಶ ಅಂಗಡಿ, ಚನ್ನಮ್ಮ ಕಿತ್ತೂರ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ದೊಡ್ಡಗೌಡರ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ದುಂಡಪ್ಪ ಬೆಂಡವಾಡ, ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಶ್ರೀಕರ ಕುಲಕರ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸುಭಾಸ ಪಾಟೀಲ, ಶ್ರೀ ಮಹೇಶ ಮೊಹಿತೆ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಆನಂದ ಮೂಡಲಗಿ, ಶ್ರೀ ಬಸವಣೆಪ್ಪ ಬಾಗಲಕೋಟ, ಶ್ರೀ ಶಿದ್ರಾಮಣಿ ಸೇರಿದಂತೆ ಅನೇಕರು ಇದ್ದರು.