ಬೆಂಗಳೂರು: ಸಾರ್ವಜನಿಕರಿಗೆ ಬ್ಯಾಗ್ ಗಳಲ್ಲಿ ಮರಳು ವಿತರಣೆ ಹಾಗೂ ಚಿನ್ನದ ನಾಣ್ಯಗಳನ್ನು ಬಿಡುಗಡೆ ಮಾಡುವ ಕುರಿತಾಗಿ ತೆಗೆದುಕೊಳ್ಳಬಹುದಾದ ರೂಪುರೇಷೆಗಳ ಬಗ್ಗೆ ಇಂದು ವಿಕಾಸಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರಗೇಶ ನಿರಾಣಿ ಸಭೆ ನಡೆಸಿದರು.
ಈ ಸಭೆಯಲ್ಲ (ಗಣಿ) ಕಾರ್ಯದರ್ಶಿ ಶ್ರೀ ಪಂಕಜ್ ಪಾಂಡೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿದೇರ್ಶಕ ಶ್ರೀ ಪಿ.ಎನ್.ರವೀಂದ್ರ, ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿದೇರ್ಶಕ ಪ್ರಭುಲಿಂಗ ಕವಳಿಕಟ್ಟಿ ಕರ್ನಾಟಕ ರಾಜ್ಯ ಅದಿರು ನಿಗಮದ ವ್ಯವಸ್ಥಾಪಕ ನಿದೇರ್ಶಕ ಶಿವನಾಂದ ಕಪಸಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.