ಬೆಳಗಾವಿ :ವಿಪಕ್ಷ ನಾಯಕ ಸಿದ್ದರಾಮಯ್ಯ ಮತಾಂತರ ಕಾಯ್ದೆಯನ್ನು ಕಳ್ಳರ ಹಾಗೆ ಜಾರಿಗೆ ತಂದಿದ್ದಾರೆ ಎಂದು ಇಂದು ಬೆಳಗವಿಯಲ್ಲಿ ಹೇಳಿಕೆ ನೀಡಿದ್ದಾರೆ. ಕಾಯ್ದೆಯ ವಿರುದ್ಧ ಸದನದ ಒಳಗೆ, ಹೊರಗೆ ಹೋರಾಟ ನಡೆದಿದೆ ಮತ್ತು ಮಾದ್ಯಮಗಳನ್ನು ಹೊರಗಿಟ್ಟು ಚರ್ಚೆ ಮಾಡುತ್ತಿದ್ದಾರೆ, ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದರು .
ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ಇದ್ದು ಇದರ ಬಗ್ಗೆ ಸರ್ಕಾರ ಚಿಂತನೇ ನಡೆಸುತಿಲ್ಲ ಮತ್ತು 2019ರಲ್ಲಿ ನೆರೆಯಿಂದ ಮನೆ ಕಳೆದುಕೊಂಡವರಿಗೆ ಇನ್ನುವರೆಗು ಪರಿಹಾರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.