ಬೆಂಗಳೂರು: ಕಲಬುರಗಿ ಹೊರವಲಯ ಕಮಲಾಪುರ ಬಳಿ ಇಂದು ಭೀಕರ ಅಪಘಾತ ನಡೆದು ಬಸ್ ನಲ್ಲಿದ್ದ 7 ಪ್ರಯಾಣಿಕರು ಸಜೀವ ದಹನರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸಿರುವ ಮುಖ್ಯಮಂತ್ರಿಗಳು, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.