ಜೂ.27 ಕ್ಕೆ ಸಿಎಂ ಮನೆ ಮುಂದೆ ಪ್ರತಿಭಟನೆ: ಶ್ರೀಗಳು

  • 30 Dec 2023 , 9:21 AM
  • Belagavi
  • 96

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಜೂ.27 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಹಲವಾರು ಬಾರಿ ಹೋರಾಟ ಮಾಡಿದರೂ ಮುಖ್ಯಮಂತ್ರಿಗಳು ಭರವಸೆ ನೀಡಿ ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸೂಚಿಸಲಾಗಿದೆ. ಇದಕ್ಕೆ ನಮ್ಮ ನಾಯಕರನ್ನು ಕರೆಸಿ ಮಾತುಕತೆ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಉತ್ತರವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಮೇಲೆ ವಿಶ್ವಾಸ ಇದೆ. ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ನಂಬಿದ ಹಾಗೆ ನಿಮ್ಮ ಮೇಲೂ ವಿಶ್ವಾಸ ಇದೆ. ಅದನ್ನು ನೆನಪಿಸುವ ನಿಟ್ಟಿನಲ್ಲಿ ಸಿಎಂ ಶಿಗ್ಗಾವಿ ನಿವಾಸದ ಎದುರು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಸುಮಾರು ಒಂದು ಲಕ್ಷ ಸಮಾಜದ ಬಾಂಧವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಸ್ವತಃ ಹಾವೇರಿ ಜಿಲ್ಲೆಯಲ್ಲಿ ಜಿಪಂ ವ್ಯಾಪ್ತಿಯಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸಮಾಜದ ಬಾಂಧವರಲ್ಲಿ ಮನವಿ ಮಾಡುವೆ. ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದ ಮೇಲೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಯಾರ ಚಾಡಿ ಮಾತುಗಳನ್ನು ಕೇಳಬಾರದು. ನ್ಯಾಯ ಸಮ್ಮತವಾಗಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.

ಹಿಂದೂಳಿದ ಆಯೋಗ ಸಮೀಕ್ಷೆ ಮಾಡಿ ವರದಿ ನೀಡಿದ್ದರೇ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸಿಗುತ್ತಿತ್ತು. ಅವರು ಚುನಾವಣೆ, ಕೊರೊನಾ ಸೋಂಕಿ‌ ಭೀತಿಯಿಂದ ವಿಳಂಬ ಮಾಡಿದ್ದಾರೆ ಎಂದರು.

Read All News