ಹೊರಟ್ಟಿಯವರಿಗೆ ವಯಸ್ಸಾಗಿಲ್ವಾ ? ಕುಲಕರ್ಣಿ ಪ್ರಶ್ನೆ

  • 14 Jan 2024 , 11:04 PM
  • Belagavi
  • 107

ಬೆಳಗಾವಿ: ವಾಯುವ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಹೇಳಿದರು.

ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಕಾಶ ಹುಕ್ಕೇರಿ ಅವರು ಎಲ್ಲ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ‌. ಶಿಕ್ಷಕ ಮತ ಕ್ಷೇತ್ರದಲ್ಲಿಯೂ ಸಹ ಒಳ್ಳೆಯ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜಕಾರಣದಲ್ಲಿ ವಯಸ್ಸಿನ ಲೆಕ್ಕ ಬರುವುದಿಲ್ಲ. ಅನುಭವ ಮುಖ್ಯ. ಶಾಸಕ ಕ್ಷೇತ್ರದಲ್ಲಿ ತಳಮಟ್ಟದಲ್ಲಿ ಸುತ್ತಾಡಬೇಕು. ಶಿಕ್ಷಕ ‌ಮತಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುವ ಪ್ರಕಾಶ ಹುಕ್ಕೇರಿ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅಲ್ಲದೆ ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬಸವರಾಜ ಹೊರಟ್ಟಿ ಅವರಿಗೆ ನೀಡಿದೆ ಅದಕ್ಕೇನು ಹೇಳುತ್ತಾರೆ. ಇದು ಪ್ರಶ್ನೆ ಬರುವುದಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read All News