ನಾಳೆ, ನಾಡಿದ್ದು ಭಾಸ್ಕರ್ ರಾವ್ ಬೆಳಗಾವಿಗೆ

  • 15 Jan 2024 , 1:25 AM
  • Belagavi
  • 99

ಬೆಳಗಾವಿ: ಆಮ್ ಆದ್ಮಿ ಉಪಾಧ್ಯಕ್ಷ ಭಾಸ್ಕರ್ ರಾವ್ ಜೂ.17 ಹಾಗೂ 18 ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜೂ. 17 ರಂದು ಅಥಣಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರೊಂದಿಗೆ ಸಭೆ ನಡೆಸುವ ಅವರು, ರಾಯಬಾಗ, ಕುಡಚಿ ಹಾಗೂ ಗೋಕಾನಲ್ಲಿ ಸಭೆ ನಡೆಸಲಿದ್ದಾರೆ.

ಜೂ.18 ರಂದು ಬೆಳಗಾವಿಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರದ ಆಪ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಬಳಿಕ ಖಾನಾಪುರ, ಕಿತ್ತೂರು, ಬೈಲಹೊಂಗಲ, ಸಭೆ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read All News