ಆಪ್ತ ಸ್ನೇಹಿತನನ್ನು ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಸಚಿವ ರಮೇಶ

  • 14 Jan 2024 , 9:46 PM
  • Belagavi
  • 113

ಬೆಳಗಾವಿ: ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬಾಲ್ಯ ಸ್ನೇಹಿತರಾಗಿದ್ದ ಎಸ್.ಎ ಎಂ ಕೊತ್ವಾಲ್ ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದರೆ. ಗೋಕಾಕ ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರೂ ಆಗಿದ್ದ ಇವರು ಗೋಕಾಕ ನಗರಸಭೆಗೆ 8 ಬಾರಿ ಆಯ್ಕೆಯಾಗಿದ್ದರು ಗೋಕಾಕದ ಪ್ರಭಾವಿ ಮುಖಂಡರಲ್ಲಿ ಇವರು ಕೂಡ ಒಬ್ಬರು . ರಮೇಶ ಜಾರಕಿಹೊಳಿಯವರೊಂದಿಗೆ ಬಾಲ್ಯದಿಂದಲೂ ಆತ್ಮೀಯ ಒಡನಾಟ ಹೊಂದಿದ್ದ ರಮೇಶ ಜಾರಕಿಹೊಳಿ ಆಪ್ತ ಸ್ನೇಹಿತನನ್ನು ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದರು ಅಲ್ಲದೇ ಜಾರಕಿಹೊಳಿ ಕುಟುಂಬದೊಂದಿಗೆ ಇವರು ಅವಿನಾಭಾವ ಸಂಬಂಧ ಹೊಂದಿದ್ದರು. ಇವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಅಶೋಕ ಪೂಜಾರಿ ಸೇರಿದಂತೆ ಇತರರು ಕೊತ್ವಾಲ್ ರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

Read All News