ಬೆಳಗಾವಿ: ಬೆಳಗಾವಿ ಬಿಜೆಪಿ ಗ್ರಾಮೀಣ ಮಂಡಲದಲ್ಲಿ ಹಿಂಡಲಗಾ ಪಂಚಾಯತ ಕಚೇರಿ ಹಾಗೂ ಸುತ್ತಮುತ್ತ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಡಾ. ಶಾಮಾಪ್ರಸಾದ ಮುಖರ್ಜಿಯವರ ಬಲಿದಾನ ಮತ್ತು ಜಯಂತಿ ನಿಮಿತ್ಯ 1000 ಸಾವಿರ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಸೋಮಪ್ರಕಾಶ್, ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ,ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ಮಾಜಿ ಶಾಸಕರು ಜಿಲ್ಲಾ ಅಧ್ಯಕ್ಷರು ಸಂಜಯ್ ಪಾಟೀಲ್ ರಾಜ್ಯ ಎಸ್.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಪೃಥ್ವಿ ಸಿಂಗ್ ಜೀ, ಗ್ರಾಮೀಣ ಜಿಲ್ಲಾ ಅಧ್ಯಕ್ಷ ಯಲ್ಲೇಶ್ ಕೋಲ್ಕಾರ್, ಪ್ರಧಾನ ಕಾರ್ಯದರ್ಶಿ ಈರಪ್ಪ ಢವಳೇಶ್ವರ, ಕಾರ್ಯಕ್ರಮದ ಸಂಚಾಲಕ ರಮೇಶ್ ಹರಿಜನ ಮಂಡಲ ಅಧ್ಯಕ್ಷ ಕಮಲಾಕರ ಕೋಲಕಾರ, ಗ್ರಾಮ ಪಂಚಾಯತ್ ಅಧ್ಯಕ್ಷ ನಾಗೇಶ ಮನ್ನೋಳ್ಕರ್ ಮತ್ತು ಎಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.