ಬೆಳಗಾವಿ : ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರವರೆಗೆ ಸೇವಾಸಪ್ತಾಹ ಪಂಡಿತ ದೀನ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾ ಗಾಂಧಿಯವರ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮ ಕರ್ನಾಟಕದಲ್ಲಿ ಆಯೋಜಿಸುವ ಕುರಿತು ಬೆಳಗಾವಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕರು ಮತ್ತು ಬೆಳಗಾವಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಸಂಜಯ ಪಾಟೀಲ್ ಅವರ ನೇತೃತ್ವದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ವರ್ಷ ಸೆಪ್ಟೆಂಬರ್ 17 ನರೇಂದ್ರ ಮೋದಿ ಅವರು 70ರ ವಸಂತಕ್ಕೆ ಕಾಲಿಡುತ್ತಿರುವುದು ಸಂತಸದ ವಿಷಯವಾಗಿದೆ.
ಸೆಪ್ಟೆಂಬರ್ 17 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿ ವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನವನ್ನು ಆಚರಿಸಿ ಅವರ ಆರೋಗ್ಯಕರ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆಯನ್ನು ಮಾಡುತ್ತಾ ಬಂದಿದ್ದೇವೆ. ಸೇವಾ ಹಿ ಸಂಘಟನೆ ಎಂಬ ಪರಿಕಲ್ಪನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾರವರ ಕರೆಯ ಮೇರೆಗೆ ಇದೆ ಸಪ್ಟೆಂಬರ್ 14 ರಿಂದ ಅಕೊಬರ್ 02 ರವರಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಆಯೋಜಿಸಲಾಗಿದೆ ಎಂದರು.
ಈ ಸಮಾವೇಷದಲ್ಲಿ ಸಮಾಜದ ಪ್ರಮುಖರು ಪ್ರಮುಖ ನಾಯಕರಿಂದ ಉಪನ್ಯಾಸ ಏರ್ಪಡಿಸುವುದು. ಇನ್ನು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನೂ ಆಚರಿಸಲಾಗುದು ಮತ್ತು ಮಹಾತ್ಮ ಗಾಂಧೀಜಿ, ಪಂಡಿತ್ ದೀನದಯಾಳ್ ಜಯಂತಿ ಆಚರಣೆಯನ್ನು ಸಹ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.