ಸಿಎಂ ಬಿಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ

  • 14 Jan 2024 , 9:55 PM
  • Bengaluru
  • 97

ಬೆಂಗಳೂರು: ಸಿಎಂ ಬಿಎಸ್. ಯಡಿಯೂರಪ್ಪ ಸಂಪುಟದಲ್ಲಿ ಮಹತ್ವದ ಬದಲಾವಣೆ ತಯಾರಿ ನಡೆಸಿದ್ದು ಇಬ್ಬರು ಸಚಿವರ ಖಾತೆ ಬದಲಾವಣೆಗೆ ಮುಂದಾಗಿದ್ದಾರೆ. ಸಚಿವರಾದ ಡಾ.ಕೆ. ಸುಧಾಕರ್ ಹಾಗೂ ಬಿ. ಶ್ರೀರಾಮುಲು ಅವರ ಖಾತೆಯನ್ನು ಬದಲಿಸಲು ಬಿಎಸ್‌ವೈ ತೀರ್ಮಾನಿಸಿದ್ದಾರೆ.

ಸಚಿವ ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಡಾ.ಕೆ. ಸುಧಾಕರ್ ನೀಡಲಾಗುವುದು ವೈದ್ಯಕೀಯ ಶಿಕ್ಷಣ ಇಲಾಖೆ ಜೊತೆಗೆ ಆರೋಗ್ಯ ಇಲಾಖೆ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಇನ್ನು ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಖಾತೆ ಕೊಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

Read All News