ಹುಕ್ಕೇರಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದÀ ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ಶಾಸಕ ಸತೀಶ ಜಾರಕಿಹೊಳಿ ನೆರೆವೇರಿಸಿದರು. ಕೆಲವು ದಿನಗಳ ಹಿಂದೆ ಶಿವಾಜಿ ಮೂರ್ತಿ ಸ್ಥಾಪನೆ ವಿವಾದಕ್ಕೆ ಇಡಾಗಿದ್ದ ಮಣಗುತ್ತಿ ಗ್ರಾಮದಲ್ಲಿ, ಇಂದು ಶಾಸಕರು ಮೂರು ಗ್ರಾಮಗಳ ಗ್ರಾಮಸ್ಥರ ಮುಖಂಡರೊAದಿಗೆ ಚರ್ಚಿಸಿ, ಅವರ ಒಮ್ಮತ ಅಭಿಪ್ರಾಯದೊಂದಿಗೆ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ನೆರೆವೇರಿಸುವ ಮೂಲಕ ಅಲ್ಲಿಯ ವಿವಾದಕ್ಕೆ ತೆರೆ ಎಳೆದಿದ್ದಾರೆ.