ಬೆಳಗಾವಿ: ಸಾಹಿತಿಗಳು ಹಾಗೂ ನಾಗನೂರು ಮಠದ ಸೇವಕರಾದ ಪ್ರಕಾಶ ಗಿರಿಮಲ್ಲಣ್ಣವರ ಅವರ ನೂತನ ಮನೆಯ ಗೃಹಪ್ರವೇಶ ಸಮಾರಂಭ ಹಾಗೂ ಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ದಗಂಗಾ ಮಹಾಸ್ವಾಮಿಗಳು, ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ ಅವರ ಪುಣ್ಯ ಸ್ಮರಣೆ ನಿಮಿತ್ತ "ಬಂಡಾಯ ಜಗದ್ಗುರು ಜೊತೆಗೆ ಮಾತುಕತೆ", "ಭಾವೈಕ್ಯ ಬಂಧು" ಮತ್ತು "ಬಯಲ ಬೆಳಕು" ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಶ್ರೀ ಮ.ನಿ.ಪ್ರ. ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಶಾಸಕ ಅನೀಲ್ ಬೆನಕೆ ಸೇರಿದಂತೆ ಇತರರು ಉಪಸ್ಥಿತರಿದ್ದರು.