ವಿಜಯಪೂರ: ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಹಾಗೂ ಸಂತ್ರಸ್ತರ ಕೇಂದ್ರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಸಂತಸ್ತರ ಸಮಸ್ಯೆಯನ್ನು ಆಲಿಸಿ ಶೀಘ್ರದಲ್ಲಿ ಪರಿಹಾರ ಒದಗಿಸುವ ಕುರಿತು ಭರವಸೆ ನೀಡಿದರು ಜೊತೆಗೆ ಭೀಮಾನದಿ ಪ್ರವಾಹದಿಂದಾಗಿ ಮನೆಯೊಳಗೆ ನೀರು ನುಗ್ಗಿ ಸಮಸ್ಯೆ ಉಂಟಾದ ಸಂತ್ರಸ್ತರ ಖಾತೆಗಳಿಗೆ ತುರ್ತಾಗಿ 2 ದಿನಗಳಲ್ಲಿ, 10,000 ರೂ. ಜಮಾ ಮಾಡಲಾಗುವುದು, ಪರಿಹಾರ ಕೇಂದ್ರಗಳಲ್ಲಿರುವ ನೆರೆ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆಯಾಗದAತೆ, ಕಾಳಜಿ ವಹಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಈ ವೇಳೆಯಲ್ಲಿ, ನೆರೆ ಸಂಕಷ್ಟದಲ್ಲಿದ್ದ ಸಂತ್ರಸ್ತರನ್ನು ಸೂಕ್ತ ಸಮಯದಲ್ಲಿ ರಕ್ಷಿಸಿದ ಯೋಧರಿಗೆ ಧನ್ಯವಾದ ಸಲ್ಲಿಸಲಾಯಿತು.