ಬೆಳಗಾವಿ: ನಾನು ರೆಸಾರ್ಟ್ ರಾಜಕೀಯ ಮಾಡಿಲ್ಲ ಎಂದು ಖಾನಾಪುರ ಮತ ಕ್ಷೇತ್ರದ ಎಂಇಎಸ್ ಮಾಜಿ ಶಾಸಕ ಅರವಿಂದ ಪಾಟೀಲ ಹೇಳಿಕೆ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನಲೆ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ಮೂರು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ ನನಗೂ ಸಂಖ್ಯಾಬಲ ಇದೆ ಫಲಿತಾಂಶದ ಬಳಿಕ ಎಲ್ಲವನ್ನು ಹೇಳುವೆ ಹಾಗೂ ಬಿಜೆಪಿ ಸೇರ್ಪಡೆಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಮಾಹಿತಿ ನೀಡುವೆ ಎಂದು ಹೇಳಿಕೆ ನೀಡಿದ್ದಾರೆ.