ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಉತ್ತರ ಮಂಡಲದ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ನಗರದ ಕಣಬರ್ಗಿ ರಸ್ತೆ ಪಕ್ಕದಲ್ಲಿರುವ ಸಂಕಲ್ಪ ಗಾರ್ಡನ ಕಾರ್ಯಾಲಯದಲ್ಲಿ ಜರುಗಿತು. ಈ ಸಭೆಯ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ವಿಷೇಶ ಪ್ರತಿನಿಧಿ ಶಂಕರಗೌಡ ಪಾಟೀಲ ಅವರು ದೀಪ ಪ್ರಜ್ವಲನೆಯ ಮುಖಾಂತರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ, ಭಾರತೀಯ ಜನತಾ ಪಾರ್ಟಿ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ ಮತ್ತು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ಅಧ್ಯಕ್ಷ ಮುಕ್ತಾರ ಪಟಾನ್, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ ಜಾಧವ ಮತ್ತು ರಾಜ್ಯ ಒಳಚರಂಡಿ ಮಂಡಳಿ ನಿರ್ದೇಶಕಿ ಶ್ರೀಮತಿ ದೀಪಾ ಕುಡಚಿ,

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುಳಪ್ಪಾ ಹೂಸಮನಿ, ಭಾಜಪಾ ಮಹಾನಗರ ಮಾಜಿ ಅಧ್ಯಕ್ಷ ರಾಜೇಂದ್ರ ಹರಕುಣಿ ಹಾಗೂ ಬೆಳಗಾವಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಾದಾಗೌಡ ಬಿರಾದರ, ಮುರುಗೇಶ ಪಾಟೀಲರು ಸ್ವಾಗತಿಸಿದರು ಹಾಗೂ ಉತ್ತರ ಮಂಡಲದ ಅಧ್ಯಕ್ಷರಾದ ಪಾಂಡುರoಗ ದಾಮಣೇಕರ ಪ್ರಸ್ತಾವಣೆ ಮಾಡಿದರು,

ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿ ವಿಜಯ ಕೊಡಗಾನೂರ ನಿರೂಪಿಸಿದರು, ಭಾರತೀಯ ಜನತಾ ಪಾರ್ಟಿ ಬೆಳಗಾವಿ ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿ ಈರಯ್ಯಾ ಖೋತ ವಂದನಾರ್ಪಣೆ ಮಾಡಿದರು.
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಮತ್ತು ಬೆಳಗಾವಿ ಉತ್ತರ ಮಂಡಲದ ಪದಾಧಿಕಾರಿಗಳು ಹಾಗೂ ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರಕೋಷ್ಠ ಸಂಚಾಲಕರು ಹಾಗೂ ಸಹ ಸಂಚಾಲಕರು ಮತ್ತು ಬೆಳಗಾವಿ ಉತ್ತರ ಮಂಡಲದ ಮಹಾಶಕ್ತಿ ಕೇಂದ್ರ ಪ್ರಮುಖರು ಹಾಗೂ ಬೆಳಗಾವಿ ಮಹಾನಗರ ಮತ್ತು ಬೆಳಗಾವಿ ಉತ್ತರ ಮಂಡಲದ ಪ್ರಬಂಧಕರು ಉಪಸ್ಥಿತರಿದ್ದರು.