ಬೆಳಗಾವಿ: ಕಾಂಗ್ರೆಸ್ ಸರಕಾರ ನೀಡಿದ ಗ್ಯಾರಂಟೀಗಳಲ್ಲಿ ಒಂದಾದ ಗೃಹಜ್ಯೋತಿಗೆ ಇಂದು ಬೆಳಗಾವಿಯಲ್ಲಿ ಅದ್ದೂರಿ ಚಾಲನೆ ನೀಡಿದ್ದು ಕಾಂಗ್ರೆಸ್ ನಾವು ನುಡಿದಂತೆ ನಡೆಯುವ ಸರಕಾರ ಎಂದು ಮತ್ತೊಮ್ಮೆ ಸಾಬೀತು ಪಡಿಸಿದೆ.
ಬೆಳಗಾವಿಯ ಕುಮಾರ ಗಂಧರ್ವ ಹಾಲನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಜ್ಯೋತಿ ಗ್ಯಾರಂಟೀಗೆ ಚಾಲನೆ ನೀಡಲಾಗಿದ್ದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ , ರಾಜು ಶೇಠ ,ಚನ್ನರಾಜ್ ಹಟ್ಟಿಹೊಳಿ , ಬೆಳಗಾವಿ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.