ಬೆಳಗಾವಿ: ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಭಾನುವಾರ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದಾರೆ. ಆಮ್ ಆದ್ಮಿ ಪಕ್ಷದಿಂದ ಹಮ್ಮಿಕೊಳ್ಳಲಾಗಿರುವ ಗ್ರಾಮ ಸಂಪರ್ಕ ಅಭಿಯಾನ ನಡೆಸಲು ಪೃಥ್ವಿ ರೆಡ್ಡಿ ಆಗಮಿಸಲಿದ್ದು, ಭಾನುವಾರ ಮಧ್ಯಾಹ್ನ 3ಕ್ಕೆ ಪ್ರವಾಸಿ ಮಂದಿರದಲ್ಲಿ ಆಪ್ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಆಪ್ ಪ್ರಕಟಣೆಯಲ್ಲಿ ತಿಳಿಸಿದೆ.