ಭಾರತ ಜೋಡೊ ಯಾತ್ರೆ ಯಶಸ್ಸಿಗೆ ಕಾರ್ಯಕರ್ತರು ಶ್ರಮಿಸಿ: ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ

  • 15 Jan 2024 , 2:28 AM
  • Belagavi
  • 147

ಸವದತ್ತಿ: ಭಾರತ ಜೋಡೋ ಪಾದಯಾತ್ರೆ ಮೂಲಕ   ಸುಭದ್ರ ದೇಶ ಕಟ್ಟುವ ಕಾಂಗ್ರೆಸ್ ನ ಮಹೋದ್ದೇಶ ಯಶಸ್ವಿಯಾಗಿ ಈಡೇರುವ ನಿಟ್ಟಿನಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆಯಿತ್ತರು.


ಸವದತ್ತಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಭಾರತ ಜೋಡೋ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ  ಭಾಗವಹಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ತನ್ನದೇ ಆದ ಸಿದ್ಧಾಂತಗಳ ಮೂಲಕ ಈ ಪಾದಯಾತ್ರೆಯನ್ನು ಕೈಗೊಂಡಿದೆ.

70-80 ವರ್ಷಗಳಿಂದ ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಜನರಿಗೆ ತಿಳಿಸುತ್ತಾ ದೇಶದ ಉದ್ದಗಲಕ್ಕೂರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಪಾದಯಾತ್ರೆ ಸಾಗುತ್ತಿದೆ. ಇದಕ್ಕೆ ಹೆಚ್ಚಿನ ಜನಬೆಂಬಲ ದೊರೆಯುವಂತೆ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ಹೇಳಿದರು.


ಸಭೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಆರ್.ವಿ. ಪಾಟೀಲ, ಪಂಚನಗೌಡ ದ್ಯಾಮನಗೌಡರ, ವಿನಯ ನಾವಲಗಟ್ಟಿ, ದಯಾನಂದ ಪಾಟೀಲ, ಡಿ.ಡಿ. ಟೋಪೋಜಿ, ಮಹಾಂತೇಶ ಮತ್ತಿಕೊಪ್ಪ, ವಿಶ್ವಾಸ ವೈದ್ಯ,  ಶಿವಾ ಶಿಂತ್ರಿ, ಲಕ್ಕಪ್ಪ ಸವದತ್ತಿ, ಲಕ್ಕನ್ನವರ, ಕಲ್ಪನಾ ಜೋಶಿ ಹಾಗೂ ಪಕ್ಷದ ಹಿರಿಯರು ಉಪಸ್ಥಿತರಿದ್ದರು.

Read All News