ಬೆಳಗಾವಿ
ಬೆಳಗಾವಿಯಲ್ಲಿ ಜಿಲ್ಲಾಡಳಿತ, ಜಿಪಂ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೋಟರಿ ಕ್ಲಬ್ ಆಫ್ ಬೆಳಗಾವಿ ಸೆಂಟ್ರಲ್ ವತಿಯಿಂದ ಮಾ.7 ರಿಂದ 11ರವರೆಗೆ ಸಿಪಿಎಡ್ ಮೈದಾನದಲ್ಲಿ ಕೃಷಿ ಉತ್ಸವ ಸಮಾರಂಭರಕ್ಕೆ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಶನಿವಾರ ರೋಟರಿ ಕ್ಲಬ್ ಆಫ್ ಬೆಳಗಾವಿ ಸೆಂಟ್ರಲ್ ವತಿಯಿಂದ ಆಮಂತ್ರಣ ನೀಡಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಅಳವಣಿ, ಅಭಯ ಜೋಶಿ, ಮಾಜಿ ಅಧ್ಯಕ್ಷ ರವಿ ಹತ್ತರಗಿ, ಅಭಿನಂದನ ದರಗಶೆಟ್ಟಿ ಉಪಸ್ಥಿತರಿದ್ದರು.