ಬೆಳಗಾವಿ :27 ಫೆಬ್ರುವರಿ 2023 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಮಹಾನಗರಕ್ಕೆ ಆಗಮಿಸಲಿದ್ದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ವತಿಯಿಂದ ಪೂರ್ವ ಭಾವಿ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರು ಹಾಗೂ ಶಾಸಕರಾದ ಅನಿಲ ಬೆನಕೆ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ರಾಜ್ಯ ಕಾರ್ಯದರ್ಶಿ ಕು ಉಜ್ವಲಾ ಬಡವನಾಚೆ ರಾಜ್ಯ ವಕ್ತಾರರಾದ ಎಮ್ ಬಿ ಝಿರಲಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬಸವರಾಜ ಯಂಕಂಚಿ, ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಅಕ್ಕಲಕೋಟ, ಸಂಘಟನಾ ಸಹ ಪ್ರಧಾನ ಕಾರ್ಯದರ್ಶಿ ಎಮ್. ಸಿ. ಜಯಪ್ರಕಾಶ ಹಾಗೂ ಬೆಳಗಾವಿ ಮೇಯರ ಶ್ರೀಮತಿ ಶೋಭಾ ಸೋಮನಾಚೆ ಹಾಗೂ ಉಪಮೇಯರ ರೇಷ್ಮಾ ಪಾಟೀಲ ಪ್ರಮುಖರಾದ ಆರ್ ಎಸ್ ಮುತಾಲಿಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಾದಾಗೌಡ ಬಿರಾದಾರ ಬೆಳಗಾವಿ ಉತ್ತರ ಮತ್ತು ದಕ್ಷಿಣ ಮಂಡಲದ ಅಧ್ಯಕ್ಷರಾದ ಗೀತಾ ಸುತಾರ, ವಿಜಯ ಕೊಡಗಾನೂರ ಹಾಗೂ ಮಾಧ್ಯಮ ಸಂಚಾಲಕರಾದ ಶರದ ಪಾಟೀಲ ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕರಾದ ಕೇದಾರನಾಥ ಜೋರಾಪೂರ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶರದ ಪಾಟೀಲ ಮಾಧ್ಯಮ ಸಂಚಾಲಕರು ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲೆ