ದೀಪಾವಳಿ ಉಡುಗೊರೆಯ ನೆಪದಲ್ಲಿ ಹಲವು ಮಾಧ್ಯಮ ಸಂಸ್ಥೆಗಳ ಮುಖ್ಯ ವರದಿಗಾರರಿಗೆ ಸಿಎಂ ತಮ್ಮ ಮಾಧ್ಯಮ ಸಂಯೋಜಕ ಶಂಕರ್ ಪಗೋಜಿ ಮೂಲಕ ಲಂಚ ನೀಡಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.
ಪ್ರಕರಣದ ತನಿಖೆಗಾಗಿ ಕರ್ನಾಟಕ ಲೋಕಾಯುಕ್ತ ಪೊಲೀಸ್ನ ಎಡಿಜಿಪಿಗೆ ನಿರ್ದೇಶನ ನೀಡುವಂತೆ ದೂರುದಾರರು ಕೋರಿದ್ದಾರೆ ಎಂದು ANI ಸುದ್ದಿ ಸಂಸ್ಥೆ ಟ್ವೀಟ್ ಮೂಲಕ ತಿಳಿಸಿದೆ.