ಬೆಳಗಾವಿ :ಗಡಿ ವಿವಾದದ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರ ಎರಡೂ ರಾಜ್ಯಗಳ ಸಿಎಂ ಜತೆಗೆ ಸಭೆ ನಡೆಸಿ ಸುಪ್ರೀಂ ಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೆ ಎರಡೂ ರಾಜ್ಯ ಶಾಂತಿಯಿಂದ ಇರಬೇಕೆಂದು ಹೇಳಿದ್ದಾರೆ. ನಾವು ಸಹ ಇದನ್ನೆ ಹೇಳಿಕೊಂಡು ಬರುತ್ತಿದ್ದೇವು ಎಂದು ಕನ್ನಡ ಕ್ರೀಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.
ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ಸಚಿವರ ಸಭೆ ನಡೆಸಿದ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೋಗಿ ಕೇಂದ್ರಕ್ಕೆ ಮಧ್ಯಸ್ಥಿಕೆ ವಹಿಸದಂತೆ ಇರಿ ಎಂದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.