ತೋಟಗಾರಿಕೆ ಪಿತಾಮಹ ಡಾ.ಎಂ.ಮರೀಗೌಡ ಪುತ್ಥಳಿ ಅನಾವರಣ

  • Shivaraj Bandigi
  • 15 Jan 2024 , 3:44 AM
  • Mysuru
  • 272

ಮೈಸೂರು : ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಯ ರೂವಾರಿಯಾಗಿದ್ದರು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್ ನಲ್ಲಿ ಡಾ.ಎಂ.ಹೆಚ್.ಮರೀಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಡಾ.ಎಂ.ಹೆಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ ಎಂದು ತಿಳಿಸಿದರು

Read All News